Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 10

ಅರಣ್ಯ 10:1-12

Help us?
Click on verse(s) to share them!
1ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,
2“ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.
3ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.
4ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.
5ನೀನು ಆರ್ಭಟವಾಗಿ ಊದಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.
6ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.
7ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬಾರದು.
8“ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.
9ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.
10ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”
11ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.
12ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.

Read ಅರಣ್ಯ 10ಅರಣ್ಯ 10
Compare ಅರಣ್ಯ 10:1-12ಅರಣ್ಯ 10:1-12