Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 10

ಅರಣ್ಯ 10:12-32

Help us?
Click on verse(s) to share them!
12ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
13ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣಮಾಡಿದ್ದು ಇದೇ ಮೊದಲನೆಯ ಸಾರಿ.
14ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.
15ಇಸ್ಸಾಕಾರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂವಾರನ ಮಗನಾದ ನೆತನೇಲನು.
16ಜೆಬುಲೂನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಹೇಲೋನನ ಮಗನಾದ ಎಲೀಯಾಬನು.
17ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.
18ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.
19ಸಿಮೆಯೋನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂರೀಷದ್ದೈಯ ಮಗನಾದ ಶೆಲುಮೀಯೇಲನು.
20ಗಾದ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ದೆಗೂವೇಲನ ಮಗನಾದ ಎಲ್ಯಾಸಾಫನು.
21ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
22ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.
23ಮನಸ್ಸೆ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಪೆದಾಚೂರನ ಮಗನಾದ ಗಮ್ಲೀಯೇಲನು.
24ಬೆನ್ಯಾಮೀನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಗಿದ್ಯೋನಿಯ ಮಗನಾದ ಅಬೀದಾನನು.
25ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.
26ಆಶೇರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಒಕ್ರಾನನ ಮಗನಾದ ಪಗೀಯೇಲನು.
27ನಫ್ತಾಲಿ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಏನಾನನ ಮಗನಾದ ಅಹೀರನು.
28ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು.
29ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.
30ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು.
31ಅದಕ್ಕೆ ಮೋಶೆಯು ಉತ್ತರವಾಗಿ, “ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.
32ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು.

Read ಅರಣ್ಯ 10ಅರಣ್ಯ 10
Compare ಅರಣ್ಯ 10:12-32ಅರಣ್ಯ 10:12-32