Text copied!
Bibles in Kannada

ಅರಣ್ಯ 10:12-32 in Kannada

Help us?

ಅರಣ್ಯ 10:12-32 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
13 ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣಮಾಡಿದ್ದು ಇದೇ ಮೊದಲನೆಯ ಸಾರಿ.
14 ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.
15 ಇಸ್ಸಾಕಾರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂವಾರನ ಮಗನಾದ ನೆತನೇಲನು.
16 ಜೆಬುಲೂನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಹೇಲೋನನ ಮಗನಾದ ಎಲೀಯಾಬನು.
17 ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.
18 ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.
19 ಸಿಮೆಯೋನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂರೀಷದ್ದೈಯ ಮಗನಾದ ಶೆಲುಮೀಯೇಲನು.
20 ಗಾದ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ದೆಗೂವೇಲನ ಮಗನಾದ ಎಲ್ಯಾಸಾಫನು.
21 ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
22 ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.
23 ಮನಸ್ಸೆ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಪೆದಾಚೂರನ ಮಗನಾದ ಗಮ್ಲೀಯೇಲನು.
24 ಬೆನ್ಯಾಮೀನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಗಿದ್ಯೋನಿಯ ಮಗನಾದ ಅಬೀದಾನನು.
25 ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.
26 ಆಶೇರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಒಕ್ರಾನನ ಮಗನಾದ ಪಗೀಯೇಲನು.
27 ನಫ್ತಾಲಿ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಏನಾನನ ಮಗನಾದ ಅಹೀರನು.
28 ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು.
29 ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.
30 ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು.
31 ಅದಕ್ಕೆ ಮೋಶೆಯು ಉತ್ತರವಾಗಿ, “ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.
32 ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು.
ಅರಣ್ಯ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019