Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 14

ಅರಣ್ಯ 14:15-24

Help us?
Click on verse(s) to share them!
15ಹೀಗಿರಲಾಗಿ ನೀನು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗದವರು ನಿನ್ನ ವಿಷಯದಲ್ಲಿ,
16“‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ, ಅವರನ್ನು ಅರಣ್ಯದಲ್ಲಿ ಕೊಂದುಹಾಕಿಬಿಟ್ಟನು’ ಎಂದು ಮಾತನಾಡಿಕೊಳ್ಳುವರು.
17ಈಗ ನೀನು ಹೇಳಿದ ಪ್ರಕಾರ ಯೆಹೋವನ ಬಲವು ದೊಡ್ಡದಾಗಿರಲಿ ಎಂದು ಬೇಡಿಕೊಳ್ಳುತ್ತೇನೆ. ನಿನ್ನ ವಿಷಯದಲ್ಲಿ,
18‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.
19ನಾವು ಐಗುಪ್ತ ದೇಶದಿಂದ ಬಂದ ದಿನದಿಂದ ಮೊದಲುಗೊಂಡು ಇದುವರೆಗೆ ನೀನು ಈ ಜನರ ಪಾಪಗಳನ್ನು ಕ್ಷಮಿಸಿದ ಪ್ರಕಾರವೇ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
20ಅದಕ್ಕೆ ಯೆಹೋವನು, “ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಅವರನ್ನು ಕ್ಷಮಿಸಿದ್ದೇನೆ.
21ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.
22ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ
23ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.
24ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.

Read ಅರಣ್ಯ 14ಅರಣ್ಯ 14
Compare ಅರಣ್ಯ 14:15-24ಅರಣ್ಯ 14:15-24