Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 14

ಅರಣ್ಯ 14:37-44

Help us?
Click on verse(s) to share them!
37ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.
38ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು.
39ಮೋಶೆ ಯೆಹೋವನ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸಲಾಗಿ ಅವರು ಬಹಳ ದುಃಖಪಟ್ಟರು.
40ಮರುದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದು ನಿಜ; ಯೆಹೋವನು ವಾಗ್ದಾನ ಮಾಡಿದ ಸ್ಥಳಕ್ಕೆ ಹತ್ತೋಣ ಬನ್ನಿ” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋದರು.
41ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ಇದು ಸಫಲವಾಗುವುದಿಲ್ಲ.
42ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ, ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ.
43ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.
44ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ.

Read ಅರಣ್ಯ 14ಅರಣ್ಯ 14
Compare ಅರಣ್ಯ 14:37-44ಅರಣ್ಯ 14:37-44