Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 15

ಅರಣ್ಯ 15:26-32

Help us?
Click on verse(s) to share them!
26ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.
27“‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.
28ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
29ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,
30ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
31ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’”
32ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.

Read ಅರಣ್ಯ 15ಅರಣ್ಯ 15
Compare ಅರಣ್ಯ 15:26-32ಅರಣ್ಯ 15:26-32