Text copied!
Bibles in Kannada

ಅರಣ್ಯ 15:26-32 in Kannada

Help us?

ಅರಣ್ಯ 15:26-32 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.
27 “‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.
28 ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
29 ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,
30 ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
31 ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’”
32 ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.
ಅರಣ್ಯ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019