Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 15

ಅರಣ್ಯ 15:7-28

Help us?
Click on verse(s) to share them!
7ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.
8“‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,
9ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
10ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.
11“‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.
12ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.
13ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.
14ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.
15ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.
16ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”
17ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
18“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದ ನಂತರ,
19ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
20ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
21“‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
22ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,
23ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ,
24ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
25ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,
26ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.
27“‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.
28ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.

Read ಅರಣ್ಯ 15ಅರಣ್ಯ 15
Compare ಅರಣ್ಯ 15:7-28ಅರಣ್ಯ 15:7-28