Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 16

ಅರಣ್ಯ 16:1-15

Help us?
Click on verse(s) to share them!
1ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ ಕರೆದುಕೊಂಡು, ಕೆಲವು ಜನರನ್ನು ಕೂಡಿಸಿದರು.
2ಇಸ್ರಾಯೇಲರ ಸಮೂಹದವರಲ್ಲಿದ್ದ ಮುಖ್ಯಸ್ಥರೂ, ಪ್ರಸಿದ್ಧರಾಗಿ ಹೆಸರು ಹೊಂದಿದ ಇನ್ನೂರೈವತ್ತು ಜನರು ಮೋಶೆಗೆ ವಿರುದ್ಧವಾಗಿ ಪ್ರತಿಭಟಿಸಿ ತಿರುಗಿಬಿದ್ದರು.
3ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.
4ಮೋಶೆ ಆ ಮಾತನ್ನು ಕೇಳಿ ಬೋರಲುಬಿದ್ದನು.
5ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.
6ನೀವು ಇದನ್ನು ಮಾಡಿರಿ, ಕೋರಹನೂ ಮತ್ತು ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು,
7ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು” ಎಂದು ಹೇಳಿದನು.
8ಪುನಃ ಮೋಶೆ ಕೋರಹನಿಗೆ, “ಲೇವಿಯ ಸಂತಾನದವರೇ, ಈಗ ಕೇಳಿರಿ,
9ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?
10ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?
11ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.
12ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, “ನಾವು ಬರುವುದಿಲ್ಲ.
13ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?
14ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.
15ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.

Read ಅರಣ್ಯ 16ಅರಣ್ಯ 16
Compare ಅರಣ್ಯ 16:1-15ಅರಣ್ಯ 16:1-15