Text copied!
Bibles in Kannada

ಅರಣ್ಯ 16:25-32 in Kannada

Help us?

ಅರಣ್ಯ 16:25-32 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.
26 ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.
27 ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.
28 ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.
29 ಹೇಗೆಂದರೆ, ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.
30 ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು.
31 ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಮನುಷ್ಯರ ಕೆಳಗಿದ್ದ ನೆಲವು ಸೀಳಿತು.
32 ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.
ಅರಣ್ಯ 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019