Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 20

ಅರಣ್ಯ 20:17-21

Help us?
Click on verse(s) to share them!
17ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.
18ಆದರೆ ಎದೋಮ್ಯರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು.
19ಅದಕ್ಕೆ ಇಸ್ರಾಯೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು” ಎಂದು ಹೇಳಿದರು.
20ಆದರೆ ಎದೋಮ್ಯರು, “ನೀವು ದಾಟಲೇ ಬಾರದು” ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು.
21ಎದೋಮ್ಯರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು.

Read ಅರಣ್ಯ 20ಅರಣ್ಯ 20
Compare ಅರಣ್ಯ 20:17-21ಅರಣ್ಯ 20:17-21