Text copied!
Bibles in Kannada

ಅರಣ್ಯ 21:4-16 in Kannada

Help us?

ಅರಣ್ಯ 21:4-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.
5 ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.
6 ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.
7 ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.
8 ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು.
9 ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
10 ತರುವಾಯ ಇಸ್ರಾಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
11 ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
12 ಅಲ್ಲಿಂದ ಹೊರಟು ಜೆರೆದ್ ತಗ್ಗಿನಲ್ಲಿ ಇಳಿದುಕೊಂಡರು.
13 ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ.
14 ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ,
15 ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದದೆ.
16 ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.
ಅರಣ್ಯ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019