Text copied!
Bibles in Kannada

ಅರಣ್ಯ 21:9-16 in Kannada

Help us?

ಅರಣ್ಯ 21:9-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
10 ತರುವಾಯ ಇಸ್ರಾಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
11 ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
12 ಅಲ್ಲಿಂದ ಹೊರಟು ಜೆರೆದ್ ತಗ್ಗಿನಲ್ಲಿ ಇಳಿದುಕೊಂಡರು.
13 ಅಲ್ಲಿಂದ ಹೊರಟು ಅರ್ನೋನ್ ನದಿಯ ಆಚೆ ಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ನದಿಯು ಅಮೋರಿಯರ ಪ್ರದೇಶದಿಂದಾಚೆ ಇರುವ ಅರಣ್ಯದಲ್ಲಿ ಮೋವಾಬ್ಯರಿಗೂ, ಅಮೋರಿಯರಿಗೂ ನಡುವೆ ಇದ್ದು ಮೋವಾಬ್ಯರ ಗಡಿಯಾಗಿದೆ.
14 ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ,
15 ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದದೆ.
16 ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.
ಅರಣ್ಯ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019