Text copied!
Bibles in Kannada

ಅರಣ್ಯ 23:3-7 in Kannada

Help us?

ಅರಣ್ಯ 23:3-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
4 ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.
5 ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.
6 ಬಿಳಾಮನು ಬಾಲಾಕನ ಬಳಿಗೆ ಹಿಂತಿರುಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಯಜ್ಞವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು.
7 ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’
ಅರಣ್ಯ 23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019