Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 13

ಅ. ಕೃ. 13:25-42

Help us?
Click on verse(s) to share them!
25ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
26“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.
27ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
28ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
29ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
30“ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
31ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
32“ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;
33‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.
34“ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.
35ಅದಕ್ಕೆ ಅನುಸಾರವಾಗಿ ಆತನು; ‘ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು’ ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ.
36“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.
37ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುವು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.
38“ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.
39ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
40ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;
41“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.
42ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.

Read ಅ. ಕೃ. 13ಅ. ಕೃ. 13
Compare ಅ. ಕೃ. 13:25-42ಅ. ಕೃ. 13:25-42