15“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.
16ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು.
17ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.