27ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.
28ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.