Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 16

ಅ. ಕೃ. 16:31-40

Help us?
Click on verse(s) to share them!
31ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,
32ಅವನಿಗೂ, ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು.
33ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.
34ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.
35ಬೆಳಗಾದ ಮೇಲೆ ಅಧಿಕಾರಿಗಳು; “ಆ ಮನುಷ್ಯರನ್ನು ಬಿಟ್ಟುಬಿಡು” ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು.
36ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.
37ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.
38ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.
39ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
40ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.

Read ಅ. ಕೃ. 16ಅ. ಕೃ. 16
Compare ಅ. ಕೃ. 16:31-40ಅ. ಕೃ. 16:31-40