Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 18

ಅ. ಕೃ. 18:21-27

Help us?
Click on verse(s) to share them!
21“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,
22ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.
23ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.
24ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು.
25ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.
26ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.
27ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.

Read ಅ. ಕೃ. 18ಅ. ಕೃ. 18
Compare ಅ. ಕೃ. 18:21-27ಅ. ಕೃ. 18:21-27