Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 19

ಅ. ಕೃ. 19:19-25

Help us?
Click on verse(s) to share them!
19ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.
20ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.
21ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.
22ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.
23ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
24ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.
25ಅವನು ಅವರನ್ನೂ ಮತ್ತು ಆ ಕಸುಬಿಗೆ ಸಂಬಂಧಪಟ್ಟ ಕೆಲಸದವರನ್ನೂ ಒಟ್ಟಿಗೆ ಕರೆಸಿ ಅವರಿಗೆ; “ಜನರೇ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾಗುತ್ತದೆಂದು ನೀವು ಬಲ್ಲಿರಿ.

Read ಅ. ಕೃ. 19ಅ. ಕೃ. 19
Compare ಅ. ಕೃ. 19:19-25ಅ. ಕೃ. 19:19-25