Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 19

ಅ. ಕೃ. 19:4-21

Help us?
Click on verse(s) to share them!
4ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,
5ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.
6ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.
7ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು.
8ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
9ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
10ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.
11ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ,
12ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.
13ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.
14ಮುಖ್ಯಯಾಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳೂ ಹಾಗೆ ಮಾಡುತ್ತಿದ್ದರು.
15ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು;
16ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.
17ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.
18ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.
19ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.
20ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.
21ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.

Read ಅ. ಕೃ. 19ಅ. ಕೃ. 19
Compare ಅ. ಕೃ. 19:4-21ಅ. ಕೃ. 19:4-21