18(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
19ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)
20ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.
21ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು
23ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ,
24“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
26ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.