Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 21

ಅ. ಕೃ. 21:4-14

Help us?
Click on verse(s) to share them!
4ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.
5ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟ್ಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,
6ಒಬ್ಬರಿಗೊಬ್ಬರು ವಂದನೆಮಾಡಿ ಹಡಗನ್ನು ಹತ್ತಿದೆವು; ಅವರು ಹಿಂತಿರುಗಿ ತಮ್ಮತಮ್ಮ ಮನೆಗಳಿಗೆ ಹೋದರು.
7ನಾವು ತೂರ್ ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿನ ಇದ್ದು,
8ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು.
9ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.
10ನಾವು ಅಲ್ಲಿ ಅನೇಕ ದಿನಗಳು ಇದ್ದ ನಂತರ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು, ಪೌಲನ ನಡುಕಟ್ಟನ್ನು ತೆಗೆದು,
11ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.
12ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು.
13ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.
14ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.

Read ಅ. ಕೃ. 21ಅ. ಕೃ. 21
Compare ಅ. ಕೃ. 21:4-14ಅ. ಕೃ. 21:4-14