25 ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಪತ್ರವನ್ನು ಬರೆದನು, ಅದೇನೆಂದರೆ;
26 “ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
27 ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.
28 ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.