Text copied!
Bibles in Kannada

ಅ. ಕೃ. 23:29-33 in Kannada

Help us?

ಅ. ಕೃ. 23:29-33 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.
30 ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.
31 ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು.
32 ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ, ತಾವು ಕೋಟೆಗೆ ಹಿಂತಿರುಗಿ ಬಂದರು.
33 ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.
ಅ. ಕೃ. 23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019