Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 25

ಅ. ಕೃ. 25:12-27

Help us?
Click on verse(s) to share them!
12ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು.
13ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.
14ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.
15ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.
16“ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.
17ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.
18ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ,
19ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.
20ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.
21ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.
22ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು.
23ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.
24ಆಗ ಫೆಸ್ತನು; “ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ, ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ, ಇಲ್ಲಿಯೂ ನನ್ನನ್ನು ಬೇಡಿಕೊಂಡರು.
25ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.
26ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.
27ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು.

Read ಅ. ಕೃ. 25ಅ. ಕೃ. 25
Compare ಅ. ಕೃ. 25:12-27ಅ. ಕೃ. 25:12-27