Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 27

ಅ. ಕೃ. 27:14-21

Help us?
Click on verse(s) to share them!
14ಸ್ವಲ್ಪ ಹೊತ್ತಿನಮೇಲೆ ಆ ದ್ವೀಪದ ಮೇಲೆ ಈಶಾನ್ಯ ಮಾರುತ ಎಂಬ ಉರಕಲೋನ್ ಗಾಳಿಯು ಅಪ್ಪಳಿಸಿತು.
15ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವುದಕ್ಕೆ ಆಗದೆಹೋದುದರಿಂದ ಗಾಳಿ ಬಂದ ಕಡೆಗೆ ಹಡಗನ್ನು ನೂಕಿಸಿಕೊಂಡು ಹೋದೆವು.
16ಕ್ಲೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳುವುದು ಸಾಧ್ಯವಾಯಿತು.
17ಅದನ್ನು ಮೇಲಕ್ಕೆ ಎತ್ತಿದ ನಂತರ ಹಗ್ಗಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆ ಮೇಲೆ ಸುರ್ತಿಸ್ ಎಂಬ ಮರಳುದಿಬ್ಬಕ್ಕೆ ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.
18ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.
19ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.
20ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು.
21ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.

Read ಅ. ಕೃ. 27ಅ. ಕೃ. 27
Compare ಅ. ಕೃ. 27:14-21ಅ. ಕೃ. 27:14-21