Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 27

ಅ. ಕೃ. 27:18-31

Help us?
Click on verse(s) to share them!
18ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.
19ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.
20ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು.
21ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.
22ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ.
23ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;
24‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.
25ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.
26ಆದರೆ, ನಾವು ಯಾವುದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ” ಎಂದು ಹೇಳಿದನು.
27ಹದಿನಾಲ್ಕನೆಯ ರಾತ್ರಿಯಲ್ಲಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ,
28ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.
29ಬಂಡೆಗಳಿಗೆ ಡಿಕ್ಕಿಹೊಡೆದೆವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಬಿಟ್ಟು ಬೇಗ ಬೆಳಗಾಗಲಿ ಎಂದು ಪ್ರಾರ್ಥಿಸಿದೆವು.
30ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ,
31ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.

Read ಅ. ಕೃ. 27ಅ. ಕೃ. 27
Compare ಅ. ಕೃ. 27:18-31ಅ. ಕೃ. 27:18-31