Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 27

ಅ. ಕೃ. 27:2-10

Help us?
Click on verse(s) to share them!
2ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.
3ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.
4ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ,
5ಕಿಲಿಕ್ಯಕ್ಕೂ, ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.
6ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು.
7ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,
8ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.
9ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;
10“ಜನರೇ, ಈ ಪ್ರಯಾಣದಿಂದ ಸರಕಿಗೂ, ಹಡಗಿಗೆ ಮಾತ್ರವಲ್ಲದೆ, ನಮ್ಮ ಪ್ರಾಣಗಳಿಗೂ ಕಷ್ಟವೂ, ಬಹು ನಷ್ಟವೂ ಸಂಭವಿಸುವುದೆಂದು ನನಗೆ ತೋರುತ್ತಿದೆ” ಎಂದು ಅವರನ್ನು ಎಚ್ಚರಿಸಿದನು.

Read ಅ. ಕೃ. 27ಅ. ಕೃ. 27
Compare ಅ. ಕೃ. 27:2-10ಅ. ಕೃ. 27:2-10