Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 2

ಅ. ಕೃ. 2:12-36

Help us?
Click on verse(s) to share them!
12ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”
13ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.
14ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
15ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.
16ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ,
17“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
18ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು.
19ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
21ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.
22“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
23ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
24ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
25ಆತನ ವಿಷಯದಲ್ಲಿ ದಾವೀದನು;, “‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
26ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು;
27ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ.
28ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.
29“ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.
30ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.
31ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು.
32ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.
33ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
34ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.
36“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.

Read ಅ. ಕೃ. 2ಅ. ಕೃ. 2
Compare ಅ. ಕೃ. 2:12-36ಅ. ಕೃ. 2:12-36