Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 4

ಅ. ಕೃ. 4:23-34

Help us?
Click on verse(s) to share them!
23ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.
24ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
25ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?
26ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?
27ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
28ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
29ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ
30ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.
31ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
32ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.
33ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.
34ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು

Read ಅ. ಕೃ. 4ಅ. ಕೃ. 4
Compare ಅ. ಕೃ. 4:23-34ಅ. ಕೃ. 4:23-34