Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 5

ಅ. ಕೃ. 5:14-27

Help us?
Click on verse(s) to share them!
14ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.
15ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
16ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳ ಜನರು ಸಹ ರೋಗಿಗಳನ್ನೂ, ದೆವ್ವ ಪೀಡಿತರನ್ನು ಹೊತ್ತುಕೊಂಡು ಗುಂಪುಗುಂಪಾಗಿ ಬರುತ್ತಿದ್ದರು; ಅವರೆಲ್ಲರೂ ಗುಣಮುಖರಾಗುತ್ತಿದ್ದರು.
17ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,
18ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.
19ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,
20“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.
21ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.
22ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು,
23“ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.
24ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.
25ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.
26ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.
27ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,

Read ಅ. ಕೃ. 5ಅ. ಕೃ. 5
Compare ಅ. ಕೃ. 5:14-27ಅ. ಕೃ. 5:14-27