Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 22

ಕೀರ್ತ 22:21-31

Help us?
Click on verse(s) to share them!
21ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.
22ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
23ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.
24ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
25ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
26ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.
27ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.
28ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.
29ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.
30ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು.
31ಅವರು ಬಂದು ಆತನ ನೀತಿಯನ್ನೂ, ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.

Read ಕೀರ್ತ 22ಕೀರ್ತ 22
Compare ಕೀರ್ತ 22:21-31ಕೀರ್ತ 22:21-31