Text copied!
Bibles in Kannada

ಕೀರ್ತ 2:1-9 in Kannada

Help us?

ಕೀರ್ತ 2:1-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?
2 ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
3 “ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ.
4 ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
5 ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,
6 “ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
7 ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
8 ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.
9 ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.
ಕೀರ್ತ 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019