1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಷೂಷನ್ ಎದೂತೆಂಬ ರಾಗ; ದಾವೀದನು ಅರಾಮ್ ರಾಜ್ಯಗಳ ಸಂಗಡ ಯುದ್ಧ ಮಾಡುವಷ್ಟರೊಳಗೆ ಯೋವಾಬನು ಹಿಂದಿರುಗಿ ಹೋಗಿ ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕಾವ್ಯ. ಬಾಯಿಪಾಠ ಮಾಡಿಸತಕ್ಕದ್ದು. ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.