Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 78

ಕೀರ್ತ 78:15-25

Help us?
Click on verse(s) to share them!
15ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ, ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.
16ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ, ನದಿಗಳಾಗಿ ಹರಿಯಮಾಡಿದನು.
17ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ, ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.
18ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು.
19ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?
20ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ.
21ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,
22ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.
23ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು,
24ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು.
25ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು.

Read ಕೀರ್ತ 78ಕೀರ್ತ 78
Compare ಕೀರ್ತ 78:15-25ಕೀರ್ತ 78:15-25