12ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ? ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ.
13ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.
14ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು.
15ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.