12ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ? ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ.
13ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.
14ಸೇನಾಧೀಶ್ವರನಾದ ದೇವರೇ, ಅಭಿಮುಖನಾಗಬೇಕು; ನೀನು ಪರಲೋಕದಿಂದ ಕಟಾಕ್ಷಿಸಿ, ಈ ದ್ರಾಕ್ಷಾಲತೆಯನ್ನು ಪರಾಂಬರಿಸು.
15ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.
16ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.
17ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು.
18ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.