Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 94

ಕೀರ್ತ 94:4-19

Help us?
Click on verse(s) to share them!
4ಕೆಡುಕರೆಲ್ಲರು ಉಬ್ಬಿಕೊಂಡು, ಅಹಂಕಾರವನ್ನು ಕಕ್ಕುತ್ತಾರೆ.
5ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;
6ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.
7ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ.
8ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?
9ಕಿವಿಮಾಡಿದವನು ಕೇಳನೋ? ಕಣ್ಣುಕೊಟ್ಟವನು ನೋಡನೋ?
10ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?
11ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ.
12ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.
13ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.
14ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.
15ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.
16ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?
17ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.
18ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು.
19ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.

Read ಕೀರ್ತ 94ಕೀರ್ತ 94
Compare ಕೀರ್ತ 94:4-19ಕೀರ್ತ 94:4-19