Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 9

ಕೀರ್ತ 9:12-20

Help us?
Click on verse(s) to share them!
12ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.
13ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
14ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.
15ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.
16ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ
17ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.
18ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.
19ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.
20ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.

Read ಕೀರ್ತ 9ಕೀರ್ತ 9
Compare ಕೀರ್ತ 9:12-20ಕೀರ್ತ 9:12-20