7ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.
8ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.
9ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
10ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.