20ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.
21ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು.
22ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.
23ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.
24ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.