23ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.
24ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.
25ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.
26ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.
27ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು.