17ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು.
18ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.
19ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.
20ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.
21ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು.
22ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.