Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 16

ಜ್ಞಾನೋ 16:23-31

Help us?
Click on verse(s) to share them!
23ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.
24ಸವಿನುಡಿಯು ಜೇನುಕೊಡ, ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.
25ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣಮಾರ್ಗವೇ.
26ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವಂತೆ ಮಾಡುವುದು, ದುಡಿಯಲಿಕ್ಕೆ ಅವನ ಬಾಯೇ ಅವನನ್ನು ಒತ್ತಾಯ ಮಾಡುವುದು.
27ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ, ಅವನ ಮಾತುಗಳು ಬೆಂಕಿಯ ಉರಿಯಂತಿದೆ.
28ತುಂಟನು ಜಗಳ ಬಿತ್ತುತ್ತಾನೆ, ಚಾಡಿಕೋರನು ಮಿತ್ರರನ್ನು ಅಗಲಿಸುತ್ತಾನೆ.
29ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುವನು.
30ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಯನ್ನು ಕಲ್ಪಿಸುವನು, ತುಟಿಯನ್ನು ಕಚ್ಚುವವನು ಕೇಡನ್ನು ಸಾಧಿಸುವನು.
31ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.

Read ಜ್ಞಾನೋ 16ಜ್ಞಾನೋ 16
Compare ಜ್ಞಾನೋ 16:23-31ಜ್ಞಾನೋ 16:23-31