Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 16

ಜ್ಞಾನೋ 16:9-17

Help us?
Click on verse(s) to share them!
9ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.
10ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು.
11ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ.
12ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು, ಅಧರ್ಮವನ್ನಾಚರಿಸಲು ಅಸಹ್ಯಪಡುವರು.
13ರಾಜರು ಸತ್ಯದ ತುಟಿಗಳನ್ನು ಮೆಚ್ಚುವರು, ಯಥಾರ್ಥವಾದಿಯನ್ನು ಪ್ರೀತಿಸುವರು.
14ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.
15ಪ್ರಭುವಿನ ಮುಖಪ್ರಸನ್ನತೆ ಜೀವ, ಆತನ ದಯೆ ಮುಂಗಾರುಮುಗಿಲು.
16ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.
17ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.

Read ಜ್ಞಾನೋ 16ಜ್ಞಾನೋ 16
Compare ಜ್ಞಾನೋ 16:9-17ಜ್ಞಾನೋ 16:9-17