Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 17

ಜ್ಞಾನೋ 17:11-24

Help us?
Click on verse(s) to share them!
11ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು.
12ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.
13ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.
14ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.
15ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.
16ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.
17ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.
18ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು ಬುದ್ಧಿಹೀನನೇ ಸರಿ.
19ಪಾಪಪ್ರಿಯನು ಕಲಹಪ್ರಿಯ, ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು.
20ವಕ್ರ ಹೃದಯನು ಶುಭವನ್ನು ಪಡೆಯನು, ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.
21ಮೂರ್ಖನನ್ನು ಹೆತ್ತವರಿಗೆ ವ್ಯಥೆ, ಮೂರ್ಖನ ತಂದೆಗೆ ವ್ಯಸನ.
22ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.
23ದುಷ್ಟನು ಲಂಚವನ್ನು ಗುಪ್ತವಾಗಿ ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುವನು.
24ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು.

Read ಜ್ಞಾನೋ 17ಜ್ಞಾನೋ 17
Compare ಜ್ಞಾನೋ 17:11-24ಜ್ಞಾನೋ 17:11-24