18ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,
19ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.
20ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.
21ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
22ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.
23ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.