15ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.
16ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.
17ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.
18ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ, ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ.