Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 22

ಜ್ಞಾನೋ 22:2-11

Help us?
Click on verse(s) to share them!
2ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.
3ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
4ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
5ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.
6ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
7ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
8ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.
9ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.
10ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.
11ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವುದು.

Read ಜ್ಞಾನೋ 22ಜ್ಞಾನೋ 22
Compare ಜ್ಞಾನೋ 22:2-11ಜ್ಞಾನೋ 22:2-11